ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
Cross references
ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.