ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
Cross references
ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.