ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.