ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
Cross references
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.