ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
Cross references
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.