ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
Cross references
ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.