ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
Cross references
ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ