ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Cross references
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!