ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
Cross references
ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;