ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
Cross references
ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.