ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
Cross references
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.
ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.