ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
Cross references
ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--