ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
Cross references
ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.