ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
Cross references
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.
ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.
ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.