ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
Cross references
ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.