Home Bibles ಪ್ರಕಟನೆ 11:15 · ಕನ್ನಡ ಬೈಬಲ್
ಪ್ರಕಟನೆ 11:15 · ಕನ್ನಡ ಬೈಬಲ್

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

Cross references

ನಿರ್ಗಮಕಾಂಡ 15:18

ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.

ಕೀರ್ತನೆಗಳು 2:2

ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 72:11

ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.

ಕೀರ್ತನೆಗಳು 86:9

ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.

ಕೀರ್ತನೆಗಳು 89:15

ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.

ಕೀರ್ತನೆಗಳು 110:4

ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.

ಕೀರ್ತನೆಗಳು 146:10

ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.

ಯೆಶಾಯ 2:2

ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 27:13

ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆಶಾಯ 44:23

ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಯೆಶಾಯ 49:6

ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 49:22

ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.

ಯೆಶಾಯ 55:5

ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.

ಯೆಶಾಯ 60:3

ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.

ಯೆರೆಮಿಯ 16:19

ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು

ಯೆಹೆಜ್ಕೇಲ 37:25

ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.

ಯೆಹೆಜ್ಕೇಲ 47:5

ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 7:14

ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

ದಾನಿಯೇಲ 7:18

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

ದಾನಿಯೇಲ 7:22

ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

ದಾನಿಯೇಲ 7:27

ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.

ಹೊಶೇಯ 2:23

ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಆಮೋಸ 9:11

ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಮೀಕ 4:1

ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.

ಮೀಕ 4:7

ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್‌ ಪರ್ವತದಲ್ಲಿ ಅವರ ಮೇಲೆ ಆಳುವನು,

ಸೆಫನ್ಯ 3:9

ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.

ಜೆಕರ್ಯ 2:11

ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

ಜೆಕರ್ಯ 8:20

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಜೆಕರ್ಯ 14:9

ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.

ಮಲಾಕಿ 1:11

ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 6:13

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ಲೂಕ 1:33

ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.

ಲೂಕ 15:6

ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.

ಲೂಕ 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಹೆಬ್ರಿಯರಿಗೆ 1:8

ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಪ್ರಕಟನೆ 8:2

ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.

ಪ್ರಕಟನೆ 8:12

ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

Interlinear

Choose Theme