ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
Cross references
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;