ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
Cross references
ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.