ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
Cross references
ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.
ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.