Home Bibles ಪ್ರಕಟನೆ 14:7 · ಕನ್ನಡ ಬೈಬಲ್
ಪ್ರಕಟನೆ 14:7 · ಕನ್ನಡ ಬೈಬಲ್

ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.

Cross references

ಆದಿಕಾಂಡ 22:12

ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.

ನಿರ್ಗಮಕಾಂಡ 20:11

ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.

ಯೆಹೋಶುವ 7:19

ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.

1 ಸಮುವೇಲ 6:5

ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್‌ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.

ನೆಹೆಮ್ಯ 9:6

ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.

ಕೀರ್ತನೆಗಳು 33:6

ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.

ಕೀರ್ತನೆಗಳು 36:1

ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.

ಕೀರ್ತನೆಗಳು 89:7

ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.

ಕೀರ್ತನೆಗಳು 95:5

ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.

ಕೀರ್ತನೆಗಳು 124:8

ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.

ಕೀರ್ತನೆಗಳು 146:5

ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

ಸಾಮೇತಿಗಳು 8:22

ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.

ಸಭಾಪ್ರಸಂಗಿ 12:13

ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.

ಯೆಶಾಯ 40:3

ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.

ಯೆಶಾಯ 40:6

ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.

ಯೆಶಾಯ 40:9

ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.

ಯೆಶಾಯ 42:12

ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.

ಯೆಶಾಯ 44:23

ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಯೆಶಾಯ 52:7

ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

ಯೆಶಾಯ 58:1

ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.

ಯೆರೆಮಿಯ 10:10

ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.

ಯೆಹೆಜ್ಕೇಲ 7:2

ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.

ಯೆಹೆಜ್ಕೇಲ 7:6

ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.

ದಾನಿಯೇಲ 8:19

ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.

ಹೊಶೇಯ 8:1

ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.

ಮಲಾಕಿ 2:2

ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.

ಮತ್ತಾಯ 25:13

ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

ಲೂಕ 17:18

ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ

ಯೋಹಾನ 5:25

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

ಅಪೋಸ್ತಲರ ಕೃತ್ಯಗಳು 14:15

ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ

ಅಪೋಸ್ತಲರ ಕೃತ್ಯಗಳು 17:23

ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.

1 ಪೇತ್ರ 4:7

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.

ಪ್ರಕಟನೆ 4:9

ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.

ಪ್ರಕಟನೆ 4:11

ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.

ಪ್ರಕಟನೆ 8:10

ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.

ಪ್ರಕಟನೆ 11:13

ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.

ಪ್ರಕಟನೆ 11:18

ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

ಪ್ರಕಟನೆ 15:4

ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

ಪ್ರಕಟನೆ 16:9

ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

ಪ್ರಕಟನೆ 18:10

ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.

Interlinear

Choose Theme