ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
Cross references
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.