ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
Cross references
ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.