ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Cross references
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ
ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.