ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
Cross references
ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.