ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Cross references
ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.