Home Bibles ಪ್ರಕಟನೆ 16:8 · ಕನ್ನಡ ಬೈಬಲ್
ಪ್ರಕಟನೆ 16:8 · ಕನ್ನಡ ಬೈಬಲ್

ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.

Cross references

ಯೆಶಾಯ 24:23

ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.

ಯೋನ 4:8

ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.

ಮತ್ತಾಯ 13:6

ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.

ಲೂಕ 21:25

ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

ಅಪೋಸ್ತಲರ ಕೃತ್ಯಗಳು 2:20

ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.

ಪ್ರಕಟನೆ 6:12

ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.

ಪ್ರಕಟನೆ 7:16

ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

ಪ್ರಕಟನೆ 8:12

ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

ಪ್ರಕಟನೆ 9:2

ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.

ಪ್ರಕಟನೆ 9:17

ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.

ಪ್ರಕಟನೆ 14:18

ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

Interlinear

Choose Theme