ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
Cross references
ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು