ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
Cross references
ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.