ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Cross references
ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.
ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.