ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Cross references
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.