ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
Cross references
ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು