Home Bibles ಪ್ರಕಟನೆ 18:6 · ಕನ್ನಡ ಬೈಬಲ್
ಪ್ರಕಟನೆ 18:6 · ಕನ್ನಡ ಬೈಬಲ್

ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.

Cross references

ನಿರ್ಗಮಕಾಂಡ 21:23

ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ

ಕೀರ್ತನೆಗಳು 137:8

ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.

ಯೆಶಾಯ 40:2

ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.

ಯೆಶಾಯ 61:7

ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.

ಯೆರೆಮಿಯ 16:18

ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.

ಯೆರೆಮಿಯ 17:18

ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

ಯೆರೆಮಿಯ 50:15

ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.

ಯೆರೆಮಿಯ 50:29

ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.

ಯೆರೆಮಿಯ 51:24

ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.

ವಿಲಾಪಗಳು 3:64

ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.

ಜೆಕರ್ಯ 9:12

ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.

2 ತಿಮೋಥೆಯ 4:14

ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.

ಪ್ರಕಟನೆ 13:10

ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 16:5

ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.

ಪ್ರಕಟನೆ 16:19

ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

ಪ್ರಕಟನೆ 17:2

ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.

ಪ್ರಕಟನೆ 17:4

ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು

Interlinear

Choose Theme