ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
Cross references
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;