ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
Cross references
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.