ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.