ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
Cross references
ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.