ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
Cross references
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.