Home Bibles ಪ್ರಕಟನೆ 2:9 · ಕನ್ನಡ ಬೈಬಲ್
ಪ್ರಕಟನೆ 2:9 · ಕನ್ನಡ ಬೈಬಲ್

ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.

Cross references

ಮತ್ತಾಯ 4:10

ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.

ಲೂಕ 4:18

ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕ 6:20

ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.

ಲೂಕ 12:21

ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.

ಲೂಕ 22:65

ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 14:22

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಅಪೋಸ್ತಲರ ಕೃತ್ಯಗಳು 26:11

ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.

ರೋಮಾಪುರದವರಿಗೆ 2:17

ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು

ರೋಮಾಪುರದವರಿಗೆ 2:28

ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.

ರೋಮಾಪುರದವರಿಗೆ 5:3

ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ

ರೋಮಾಪುರದವರಿಗೆ 8:35

ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

ರೋಮಾಪುರದವರಿಗೆ 9:6

ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;

ರೋಮಾಪುರದವರಿಗೆ 12:12

ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.

2 ಕೊರಿಂಥದವರಿಗೆ 6:10

ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

2 ಕೊರಿಂಥದವರಿಗೆ 8:2

ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

2 ಕೊರಿಂಥದವರಿಗೆ 8:9

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

1 ತೆಸಲೋನಿಕದವರಿಗೆ 3:4

ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.

2 ತೆಸಲೋನಿಕದವರಿಗೆ 1:6

ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

1 ತಿಮೋಥೆಯ 6:18

ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಪ್ರಕಟನೆ 2:2

ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;

ಪ್ರಕಟನೆ 3:9

ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು

ಪ್ರಕಟನೆ 3:17

ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme