ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
Cross references
ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.