ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
Cross references
ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.
ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.
ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.