ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
Cross references
ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.
ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.