ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.
Cross references
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.