ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
Cross references
ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.