Home Bibles ಪ್ರಕಟನೆ 21:8 · ಕನ್ನಡ ಬೈಬಲ್
ಪ್ರಕಟನೆ 21:8 · ಕನ್ನಡ ಬೈಬಲ್

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Cross references

ದ್ವಿತೀಯೋಪದೇಶಕಾಂಡ 20:8

ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.

ನ್ಯಾಯಾಧಿಪತಿಗಳು 7:3

ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.

ಸಾಮೇತಿಗಳು 19:5

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.

ಸಾಮೇತಿಗಳು 19:9

ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.

ಯೆಶಾಯ 9:15

ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

ಯೆಶಾಯ 57:11

ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?

ಮಲಾಕಿ 3:5

ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 8:26

ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

ಮತ್ತಾಯ 10:28

ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

ಮತ್ತಾಯ 25:25

ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.

ಮಾರ್ಕ 9:44

ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

ಲೂಕ 12:4

ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.

ಯೋಹಾನ 8:44

ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ

ಯೋಹಾನ 12:42

ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

1 ಕೊರಿಂಥದವರಿಗೆ 10:20

ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.

ಗಲಾತ್ಯದವರಿಗೆ 5:19

ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ

ಎಫೆಸದವರಿಗೆ 5:5

ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

2 ತೆಸಲೋನಿಕದವರಿಗೆ 2:9

ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ

1 ತಿಮೋಥೆಯ 1:9

ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

1 ತಿಮೋಥೆಯ 4:2

ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

ಹೆಬ್ರಿಯರಿಗೆ 12:24

ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಹೆಬ್ರಿಯರಿಗೆ 13:4

ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.

1 ಪೇತ್ರ 3:14

ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.

1 ಯೋಹಾನ 2:22

ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.

1 ಯೋಹಾನ 3:15

ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

1 ಯೋಹಾನ 5:4

ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.

1 ಯೋಹಾನ 5:10

ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

ಪ್ರಕಟನೆ 2:2

ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;

ಪ್ರಕಟನೆ 2:11

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

ಪ್ರಕಟನೆ 9:21

ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ಪ್ರಕಟನೆ 20:14

ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

ಪ್ರಕಟನೆ 22:15

ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

Interlinear

Choose Theme