ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
Cross references
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.