Home Bibles ಪ್ರಕಟನೆ 22:11 · ಕನ್ನಡ ಬೈಬಲ್
ಪ್ರಕಟನೆ 22:11 · ಕನ್ನಡ ಬೈಬಲ್

ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;

Cross references

ಯೋಬ 17:9

ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.

ಕೀರ್ತನೆಗಳು 81:12

ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.

ಸಾಮೇತಿಗಳು 1:24

ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

ಸಾಮೇತಿಗಳು 4:18

ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.

ಸಾಮೇತಿಗಳು 14:32

ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.

ಸಭಾಪ್ರಸಂಗಿ 11:3

ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.

ಯೆಹೆಜ್ಕೇಲ 3:27

ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.

ದಾನಿಯೇಲ 12:10

ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.

ಮತ್ತಾಯ 5:6

ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.

ಮತ್ತಾಯ 15:14

ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.

ಮತ್ತಾಯ 21:19

ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ಮತ್ತಾಯ 25:10

ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.

ಯೋಹಾನ 8:21

ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.

ಎಫೆಸದವರಿಗೆ 5:27

ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.

ಕೊಲೊಸ್ಸೆಯವರಿಗೆ 1:22

ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.

2 ತಿಮೋಥೆಯ 3:13

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ಯೂದ 1:24

ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್‌.

ಪ್ರಕಟನೆ 7:13

ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.

ಪ್ರಕಟನೆ 16:8

ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.

ಪ್ರಕಟನೆ 16:21

ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.

ಪ್ರಕಟನೆ 22:3

ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.

Interlinear

Choose Theme