ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
Cross references
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?
ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.