ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
Cross references
ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.