ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
Cross references
ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.