ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Cross references
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ